ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹಣ ವರ್ಗಾವಣೆ ಮಾಡಲು ಕೆಲವೊಂದು ತಂತ್ರಗಳನ್ನು ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೆ ಯಾರ ಖಾತೆಗೆ ಜಮಾ ಆಗಿಲ್ಲವೋ ಅಂತವರಿಗೆ ಇದೊಂದು ಸಿಹಿ ಸುದ್ದಿಯಾಗಿದೆ.
![Gruhalkshmi is a new strategy for money transfer from Govt](https://i0.wp.com/kannadadigital.com/wp-content/uploads/2024/03/Gruhalkshmi-is-a-new-strategy-for-money-transfer-from-Govt.jpg?resize=300%2C169&ssl=1)
ಭಾರತೀಯ ಅಂಚೆ ಪೇಮೆಂಟ್ ಬ್ಯಾಂಕ್ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಗೃಹಣಿಯರ ಖಾತೆ ಪರಿಶೀಲಿಸಿ ಹಣ ಬರದೆ ಇರುವ ಖಾತೆಗೆ ಹಣ ಬರುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿಯೊಂದು ಜಿಲ್ಲೆಯ ಹಳ್ಳಿಗಳಿಗೆ ತೆರಳಿ ಏಕೆ ಬರುತ್ತಿಲ್ಲ ಎನ್ನುವುದು ಪರಿಶೀಲನೆಯನ್ನು ಸರ್ಕಾರ ನಡೆಸುತ್ತಿದೆ.
Contents
25 ಗ್ರಾಮಗಳಿಗೆ ಭೇಟಿ :
ಅಂಚೆ ಇಲಾಖೆಯ ಸಿಬ್ಬಂದಿಗಳು ಇದುವರೆಗೂ 25 ಗ್ರಾಮಗಳಿಗೆ ಭೇಟಿ ನೀಡಿದ್ದು ಬ್ಯಾಂಕ್ ಖಾತೆಯಲ್ಲಿ ಏನಾದರೂ ಸಮಸ್ಯೆಗಳು ಇದ್ದರೆ ಹೊಸ ಖಾತೆಯನ್ನು ಹಂಚಿಕಛೇರಿಯಲ್ಲಿ ತೆರೆದು ಗೃಹಣಿಯರು ಮುಂದಿನ ಕಂತಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಮೂಲಕ ಸಿಗುವಂತೆ ಮಾಡಲು ಸಿಬ್ಬಂದಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ : ಕೇವಲ 100 ರೂಪಾಯಿನ ಹಳೆಯ ನೋಟ್ ನಿಂದ 40 ಲಕ್ಷ ರೂ ಪಡೆಯಿರಿ !
ಹಣ ಬರದೆ ಇರಲು ಮುಖ್ಯ ಕಾರಣ :
ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಬರದೇ ಇರಲು ಮುಖ್ಯವಾಗಿ ಬ್ಯಾಂಕಿಗೆ ಸಂಬಂಧಿಸಿದಂತೆ ಕೆಲವೊಂದು ಸಮಸ್ಯೆಗಳು ಆಗಿರುತ್ತವೆ. ಈ ಕೆವೈಸಿ ಬ್ಯಾಂಕ್ ನಲ್ಲಿ ಖಾತೆಗೆ ಮಾಡಿಸುವುದು ಹಾಗೂ ಆಧರಿಸಿ ಮ್ಯಾಪಿಂಗ್ ಮಾಡುವುದು ಕಡ್ಡಾಯ ಎಂದು ಸರ್ಕಾರ ಈಗಾಗಲೇ ತಿಳಿಸಿದೆ.
ಈ ಎಲ್ಲಾ ಕೆಲಸಗಳು ಸರಿಯಾಗಿ ಆಗದೆ ಇದ್ದರೆ ಹಾಗೂ ಕೆಲವೊಂದು ತಾಂತ್ರಿಕ ದೋಷಗಳಿಂದಾಗಿ ಇದರ ಜೊತೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸರ್ಕಾರ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ.
ಇದಲ್ಲದೆ ಒಂದಕ್ಕಿಂತ ಹೆಚ್ಚು ಕಾರ್ಯವನ್ನು ಹೊಂದಿದ್ದರೆ ಅಥವಾ ಕಳೆದ ಕೆಲವು ವರ್ಷಗಳಿಂದ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದರು ಕೂಡ ಆ ಖಾತೆಯ ಮೂಲಕ ಯಾವುದೇ ರೀತಿಯ ಹಣಕಾಸಿನ ವಹಿವಾಟು ನಡೆಸದೇ ಇದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗದೇ ಇರುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಸಹಾಯ :
ಸರ್ಕಾರದ ಮಾಹಿತಿಯ ಪ್ರಕಾರ ಪ್ರತಿಯೊಂದು ಮನೆಮನೆಗೆ ಅಂಗನವಾಡಿ ಸಹಾಯಕರು ಆಶಯರು ಹೋಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಅಲ್ಲದೆ ಇದುವರೆಗೂ ಯಾರಿಗೆ ಹಣ ಬಂದಿಲ್ಲವೋ ಅಂಥವರ ಹೆಸರನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ಅವರು ಮಾಡುತ್ತಿದ್ದು ಮಹಿಳೆಯರು ಹೆಚ್ಚು ತಲೆ ಕೆಡಿಸಿಕೊಳ್ಳದೆ ಮುಂದಿನ ಕಂತಿನ ಹಣವನ್ನು ನಿರೀಕ್ಷಿಸಬಹುದಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣ ಜಮ ಆಗಲಿದೆ ಎಂದು ತಿಳಿಸಿ ಧನ್ಯವಾದಗಳು.