ಹಲೋ ಸ್ನೇಹಿತರೇ, ರೈತರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಸರ್ಕಾರ ಪರಿಚಯಿಸಿದೆ. ರೈತರ ಕೃಷಿ ಚಟುವಟಿಕೆಯನ್ನು ಉತ್ತೇಜಿಸಲು ಹಾಗೂ ಅವರು ಉತ್ತಮ ರೀತಿಯಲ್ಲಿ ಆದಾಯ ಗಳಿಸಿಕೊಳ್ಳಲು ಅನುಕೂಲವಾಗುವಂತಹ ಕೆಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಎಕರೆ ಭೂಮಿ ಹೊಂದಿರುವ ರೈತರಿಗೆ ಸಂತಸದ ಸುದ್ದಿಯೊಂದು ಹೊರ ಬಂದಿದೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ.
![Kisan Blessing Scheme](https://i0.wp.com/kannadadigital.com/wp-content/uploads/2024/04/Kisan-Blessing-Scheme-1.jpg?resize=640%2C360&ssl=1)
ರಾಜ್ಯಗಳಿಗೆ ಸಂಬಂಧ ಪಟ್ಟ ಹಾಗೆ ಕೃಷಿ ಯೋಜನೆಗಳು ಕೂಡ ವಿಭಿನ್ನವಾಗಿರುತ್ತದೆ, ಪ್ರತಿಯೊಂದು ರಾಜ್ಯವು ತಮ್ಮ ರಾಜ್ಯದಲ್ಲಿ ಇರುವ ಕೃಷಿಕರಿಗಾಗಿ ವಿಶೇಷ ಸೌಲಭ್ಯವನ್ನು ಒದಗಿಸಿ ಕೊಡುತ್ತಾರೆ, ಇದರಲ್ಲಿ ಕರ್ನಾಟಕ ಕೂಡ ಹಿಂದೆ ಬಿದ್ದಿಲ್ಲ.
ಕೃಷಿ ಚಟುವಟಿಕೆಯಲ್ಲಿ ತೊಡಗಿರುವ 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಇದೀಗ ಕೇಂದ್ರ ಸರ್ಕಾರದ ಮಾಹಿತಿಯ ಅನ್ವಯ 25,000 ಗಳನ್ನ ಕೊಡಲಾಗುವುದು. ಹಾಗಾದ್ರೆ ಈ ಯೋಜನೆ ಯಾವುದು, ಹೇಗೆ ಪ್ರಯೋಜನ ಪಡೆದುಕೊಳ್ಳಬಹುದು ನೋಡೋಣ.
Contents
ಕಿಸಾನ್ ಆಶೀರ್ವಾದ ಯೋಜನೆ
ಕೇಂದ್ರ ಸರ್ಕಾರವು ಈಗಾಗಲೇ ಈ ಕಿಸಾನ್ ಯೋಜನೆಗಳನ್ನು ಜಾರಿಗೆ ತಂದಿದೆ ಈ ಮೂಲಕ ಪ್ರತಿ ವರ್ಷ 6,000ಗಳನ್ನು ರೈತರು ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಾಗಿದೆ. ಆಶೀರ್ವಾದ ಯೋಜನೆಯ ಅಡಿಯಲ್ಲಿ 5 ಎಕರೆಯಷ್ಟು ಜಮೀನನ್ನು ಹೊಂದಿರುವವರಿಗೆ 25,000ಗಳನ್ನು ವಾರ್ಷಿಕವಾಗಿ ನೀಡಲಾಗುವುದು.
ಅದೇ ರೀತಿ 2 ಎಕರೆಯ ಜಮೀನು ಹೊಂದಿದ್ರೆ ಐದರಿಂದ ಹತ್ತು ಸಾವಿರ ರೂಪಾಯಿಗಳನ್ನು ಒದಗಿಸಲಾಗುವುದು. ನಾಲ್ಕು ಎಕರೆ ಜಮೀನು ಹೊಂದಿರುವ ರೈತರಿಗೆ 20 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ.
ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿಮನ್ನಾ : ತಡಮಾಡದೆ ಈ ಕೆಲಸ ತಕ್ಷಣ ಮಾಡಿ !
ಅದೇ ರೀತಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿಯಲ್ಲಿ ವಾರ್ಷಿಕ 6,000 ಸಿಗುತ್ತವೆ. ಒಟ್ಟಾರೆಯಾಗಿ 31 ಸಾವಿರ ರೂಪಾಯಿಗಳನ್ನು ಕೃಷಿಕರು ಸರ್ಕಾರದಿಂದ ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಿದೆ.
ಎಲ್ಲಿ ಜಾರಿಯಲ್ಲಿ ಇದೆ ಕಿಸಾನ್ ಆಶೀರ್ವಾದ ಯೋಜನೆ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ದೇಶಾದ್ಯಂತ ಪ್ರತಿಯೊಬ್ಬ ರೈತರು ಸಹ ವಾರ್ಷಿಕವಾಗಿ 6,000ಗಳನ್ನು ಪಡೆದುಕೊಳ್ಳಬಹುದು. ಪ್ರತಿ ಕಂತಿಗೆ 2000 ಗಳಂತೆ ಮೂರು ಕಂತುಗಳಲ್ಲಿ ಈ ಹಣ ರೈತರ ಖಾತೆಗಳಿಗೆ ವಿತರಣೆ ಮಾಡಲಾಗುತ್ತದೆ.
ಇದೀಗ ಜಾರ್ಖಂಡ್ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಈ ಹಣದ ಜೊತೆಗೆ 25,000ಗಳನ್ನು ಹೆಚ್ಚುವರಿಯಾಗಿ ತಮ್ಮ ರಾಜ್ಯದ ರೈತರಿಗೆ ಒದಗಿಸಲು ಮುಂದಾಗಿದೆ. ಹಾಗಾಗಿ ಜಾರ್ಖಂಡ್ ರಾಜ್ಯದ ರೈತರು ಪ್ರತಿ ವರ್ಷ 31 ಸಾವಿರ ರೂಪಾಯಿಗಳನ್ನು ಸರ್ಕಾರದ ಕಡೆಯಿಂದ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು
- ರೈತರ ಭೂಮಿಯ ದಾಖಲೆ ಅಥವಾ ಪಹಣಿ
- ಆಧಾರ್ ಕಾರ್ಡ್.
- ವಿಳಾಸದ ಪುರಾವೆ
- ಬ್ಯಾಂಕ ಖಾತೆಯ ವಿವರ
- ಕಂದಾಯ ಇಲಾಖೆಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ (ಆಧಾರ್ ಲಿಂಕ್ ಆಗಿರಬೇಕು)
ಈ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸಬಹುದು. ಕಿಸಾನ್ ಆಶೀರ್ವಾದ ಯೋಜನೆಯು ಸದ್ಯ ಜಾರ್ಖಂಡ ರಾಜ್ಯದಲ್ಲಿ ಜಾರಿಯಲ್ಲಿದ್ದು ಸದ್ಯದಲ್ಲೇ ಕರ್ನಾಟಕಕ್ಕೂ ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದ್ದಾರೆ. ಕೃಷಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೊಡುವ ಈ ಹಣ ರೈತರಿಗೆ ಹೆಚ್ಚು ಉಪಯುಕ್ತವಾಗಬಹುದು.
ಇತರೆ ವಿಷಯಗಳು :
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ : ಹೇಗೆ ಪಡೆಯುವುದು ನೋಡಿ !
ಯಾರಿಗೆ ಗೃಹಲಕ್ಷ್ಮಿ ಹಣ ಬಂತು, ಯಾರಿಗೆ ಬಂದಿಲ್ಲ : ನಿಮ್ಮ ಮೊಬೈಲ್ ನಲ್ಲಿ ತಕ್ಷಣ ಪರಿಶೀಲನೆ ಮಾಡಿ