rtgh

ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯುವಂತೆ ಸರ್ಕಾರದ ಮನವಿ.! 24 ಜಿಲ್ಲೆಯ ರೈತರಿಗೆ ಮಾತ್ರ ಲಭ್ಯ

Krishi Bhagya Subsidy yojana

ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯ ಸಹಾಯಧನ ಸೌಲಭ್ಯ ಪಡೆಯಬೇಕೇ? ಈ ಯೋಜನೆಯಡಿಯಲ್ಲಿ ವಿವಿಧ ಕಾರ್ಯಗಳಿಗೆ ಸಹಾಯಧನ ನೀಡುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ..

Krishi Bhagya Subsidy yojana

2023-24 ನೇ ಸಾಲಿನಲ್ಲಿ ಕರ್ನಾಟಕದ 24 ಜಿಲ್ಲೆಗಳಿಗೆ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿ ರೂಪದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಮುಂದಾಗಿದೆ. ಅಂತರ್ಜಲ ವೃದ್ಧಿ & ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ ಚಟುವಟಿಕೆ ಮಾಡಲು ಅನುಕೂಲ ಕಲ್ಪಿಸಲು ಈ ಯೋಜನೆ ಸಹಾಯಕವಾಗಿದೆ

ಕೃಷಿ ಭಾಗ್ಯ ಯೋಜನೆ ಸಬ್ಸಿಡಿ- 2024

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣ, ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್ ಖರೀದಿಸಲು ಅವಕಾಶ, ನೀರನ್ನು ಬೆಳೆಗೆ ಹಾಯಿಸಲು ತುಂತುರು, ಹನಿ ನೀರಾವರಿ ಘಟಕ ಅನುಷ್ಠಾನಕ್ಕೆ ಸಹಾಯಧನ ನೀಡಲಾಗುತ್ತದೆ.

ಕೃಷಿ ಭಾಗ್ಯ ಪ್ಯಾಕೇಜ್‌ ಈ ಕೆಳಕಂಡ ಘಟಕಗಳು ಒಳಗೊಂಡಿದೆ, ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ರೈತ ಬಾಂಧವರಲ್ಲಿ ವಿನಂತಿ ಎಂದು ಸರ್ಕಾರ ತಿಳಿಸಿದೆ.

  1. ಕ್ಷೇತ್ರ ಬದು ನಿರ್ಮಾಣ.
  2. ಕೃಷಿ ಹೊಂಡ ನಿರ್ಮಾಣ.
  3. ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್.
  4. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ.
  5. ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ.

ದಾಖಲೆಗಳು:

  • ರೈತರ ಭಾವಚಿತ್ರ.
  • ರೈತರ ಅರ್ಜಿ.
  • FID (FID ಇಲ್ಲವಾದಲ್ಲಿ ಆಧಾ‌ರ್ ಪ್ರತಿ 1.ಪಹಣಿ ಪ್ರತಿ 2.ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್ ಪ್ರತಿ)

ಅರ್ಜಿ ಸಲ್ಲಿಸುವುದು ಹೇಗೆ?:

ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಪ್ಲೇ ಮಾಡಬಹುದು. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯ ಅನ್ವಯ ಮತ್ತು ಹೋಬಳಿಗೆ ನಿಗದಿಪಡಿಸಿದ ಗುರಿಗಳ ಅನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು ಎಂದು ಕೃಷಿ ಇಲಾಖೆ ಹೇಳಿದೆ.

ಇತರೆ ವಿಷಯಗಳು

ನಿಮ್ಮ ಹತ್ರ ₹5 ನೋಟ್‌ ಇದ್ರೆ ನೀವೇ ಲಕ್ಷಾಧಿಪತಿ!! ಮಾರಾಟದ ವಿಧಾನ ತುಂಬಾ ಸುಲಭ

ಏಪ್ರಿಲ್ 15ರಿಂದ ಎಲ್ಲ ಮೊಬೈಲ್ ಸೇವೆ ಸ್ಥಗಿತ! ಸರ್ಕಾರದ ಆದೇಶ

Spread the love

Leave a Reply

Your email address will not be published. Required fields are marked *