ನಮಸ್ಕಾರ ಸ್ನೇಹಿತರೆ ಸಾಕಷ್ಟು ಜನರು ಈ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳುವುದರ ಮೂಲಕ ಸಬ್ಸಿಡಿ ಸಾಲವನ್ನು ಪಡೆದು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಸಾಧ್ಯವಾಗಿದೆ ಎಂದು ಹೇಳಬಹುದು.
![Pradhan Mantri SYM Yojana](https://i0.wp.com/kannadadigital.com/wp-content/uploads/2024/04/Pradhan-Mantri-SYM-Yojana.jpg?resize=300%2C169&ssl=1)
ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಮಾಜದಲ್ಲಿ ವಾಸಿಸುವಂತಹ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಆರ್ಥಿಕವಾಗಿ ಸಬಲೀಕರಣವಾಗಬೇಕೆನ್ನುವ ಉದ್ದೇಶದಿಂದ ಅವರಿಗೆ ಸರಿಯಾದ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಬಹುದು.
ಎಷ್ಟೋ ಜನ ಈ ಯೋಜನೆಗಳ ಪ್ರಯೋಜನವನ್ನು ಪಡೆದುಕೊಂಡು ಸಬ್ಸಿಡಿ ಸಾಲವನ್ನು ಪಡೆದು ಸ್ವಂತ ಉದ್ಯಮವನ್ನು ಪ್ರಾರಂಭಿಸುತ್ತಿದ್ದಾರೆ. ಒಟ್ಟಿನಲ್ಲಿ ಸರ್ಕಾರ ಒಂದಲ್ಲ ಒಂದು ರೀತಿಯಲ್ಲಿ ಆರ್ಥಿಕ ಸಬಲೀಕರಣಕ್ಕಾಗಿ ಪ್ರಯತ್ನ ಮಾಡುತ್ತಿದೆ ಎಂದು ಹೇಳಬಹುದು.
Contents
ಪ್ರಧಾನಮಂತ್ರಿ ಎಸ್ ವೈ ಎಂ ಯೋಜನೆ :
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂಎಸ್ ವೈ ಯೋಜನೆಯು ವಿಶೇಷವಾಗಿ ಆ ಸಂಘಟಿತ ವಲಯದ ಕೂಲಿಕಾರ್ಮಿಕರಿಗೆ ಹೆಚ್ಚು ಸಹಾಯವಾಗಲಿದೆ. ಈ ಯೋಜನೆಯು ಪಿಂಚಣಿ ಯೋಜನೆಯಾಗಿದ್ದು ಈ ಯೋಜನೆಯ ಅಡಿಯಲ್ಲಿ 60 ವರ್ಷದ ನಂತರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವಂತಹ ನೌಕರರು ಪಿಂಚಣಿಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಈ ಪಿಂಚಣಿ ಸೌಲಭ್ಯವನ್ನು ಪಡೆಯಲು ಹೆಚ್ಚಿನ ಹೂಡಿಕೆ ಮಾಡುವ ಅಗತ್ಯವಿಲ್ಲ ಕೇವಲ ಎರಡು ರೂಪಾಯಿಗಳನ್ನು ಪ್ರತಿದಿನ ತೆಗೆದು ಇಟ್ಟರೆ ಸಾಕು ಪ್ರತಿ ವಾರ್ಷಿಕವಾಗಿ 36,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಸಂಘಟಿತ ವಲಯದ ಕಾರ್ಮಿಕರು ಎಂದು ಎನಿಸಿಕೊಂಡಿರುವಂತಹ ಜನರೆಂದರೆ ಬೀದಿಬದಿಯ ಸಣ್ಣಪುಟ್ಟ ಅಂಗಡಿಗಳನ್ನು ಇಟ್ಟುಕೊಂಡಿರುವ ವ್ಯಾಪಾರಿಗಳು ಇಸ್ತ್ರಿ ಮಾಡುವವರು ಮನೆ ಕೆಲಸ ಮಾಡುವವರು ಹೀಗೆ ಮೊದಲಾದವರು.
ಇದನ್ನು ಓದಿ : ಬೇಸಿಗೆ ಕಾಲದಲ್ಲಿಅಡಿಗೆ ಕೃಷಿಗೆ ಕಡಿಮೆ ನೀರು ಬಳಸಿ ತೋಟ ಉಳಿಸಿಕೊಳ್ಳುವ ವಿಧಾನ ನೋಡಿ
ಪ್ರಯೋಜನಗಳು :
ವೃದ್ಧಾಪ್ಯದ ಸಮಯದಲ್ಲಿ ಸಾಮಾನ್ಯವಾಗಿ ಆರ್ಥಿಕವಾಗಿ ತಕ್ಕಮಟ್ಟಿಗೆ ನಾವು ಸುರಕ್ಷಿತವಾಗಿ ಇರಬೇಕಾಗುತ್ತದೆ ಇಲ್ಲದಿದ್ದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಎದುರಾಗುತ್ತದೆ .
ಈ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ದಿನಕ್ಕೆ ಕೇವಲ ಎರಡು ರೂಪಾಯಿಗಳನ್ನು ಅಸಂಘಟಿತ ವಲಯದ ಕಾರ್ಮಿಕರು ಹೂಡಿಕೆ ಮಾಡುವುದರ ಮೂಲಕ ತಮ್ಮ 60 ವರ್ಷ ವಯಸ್ಸಿನ ನಂತರ 36,000ಗಳ ಹಣವನ್ನು ಅಥವಾ ತಿಂಗಳಿಗೆ 3000 ಹಣವನ್ನು ಪಿಂಚಣಿಯಾಗಿ ಪಡೆಯಬಹುದಾಗಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು :
ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.
- 18 ರಿಂದ 40 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.
- ಹದಿನೈದು ಸಾವಿರ ರೂಪಾಯಿಗಳಿಗಿಂತ ಪ್ರತಿ ತಿಂಗಳ ಆದಾಯ ಕಡಿಮೆ ಇರಬೇಕು.
- ಅಸಂಘಟಿತ ವಲಯದವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು
- ಸಂಘಟಿತ ವಲಯಕ್ಕೆ ಅರ್ಜಿದಾರರು ಸೇರಿರಬಾರದು.
- ಇನ್ಕಮ್ ಟ್ಯಾಕ್ಸ್ ಪಾರ್ವತಿ ಮಾಡುವವರಾಗಿರಬಾರದು.
- ಗಂಡ ಹೆಂಡತಿ ಇಬ್ಬರೂ ಸೇರಿ ಜಂಟಿ ಖಾತೆಯನ್ನು ತೆರೆಯಬಹುದಾಗಿದೆ.
- ಸರ್ಕಾರದ ಇತರ ಯಾವುದೇ ಯೋಜನೆಗಳ ಲಾಭವನ್ನು ಪಡೆಯಬಾರದು.
- ಸರ್ಕಾರಿ ನೌಕರಿಯಲ್ಲಿ ಕೆಲಸ ಮಾಡಬಾರದು.
ಅರ್ಜಿ ಸಲ್ಲಿಸುವ ವಿಧಾನ :
ಕೇಂದ್ರ ಸರ್ಕಾರದ ಈ ಪಿಂಚಣಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು https://labour.gov.in/pm-sym ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅಥವಾ ತಮ್ಮ ಹತ್ತಿರದ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ದಾಖಲೆಗಳು :
ಕೇಂದ್ರ ಸರ್ಕಾರದ ಈ ಪಿಂಚಣಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದಿರಬೇಕು.
ಕೊಟ್ಟರೆ ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆ ಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ 60 ವರ್ಷದ ನಂತರ 3000 ರೂಪಾಯಿಗಳ ಪಿಂಚಣಿಯ ಸೌಲಭ್ಯವನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ಸಂಘಟಿತ ವಲಯದ ಕಾರ್ಮಿಕರಿಗೆ ಶೇರ್ ಮಾಡುವ ಮೂಲಕ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ತಿಳಿಸಿ ಧನ್ಯವಾದಗಳು.